ಕೆಎಎಸ್ & ಐಎಎಸ್ ಪೂರ್ವಬಾವಿ ಪರೀಕ್ಷೆಗಾಗಿ ಅಭ್ಯರ್ಥಿಗಳಿಗೆ ಉಚಿತ ತರಬೇತಿಗೆ ಸರ್ಕಾರದಿಂದ ಅರ್ಜಿ ಆಹ್ವಾನ: KEA KAS & IAS Prelims Free Coaching in Karnataka 2025
ಸ್ನೇಹಿತರೇ 2025-26ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಮೂಲಕ ಕಲ್ಯಾಣ ಕರ್ನಾಟಕ ಭಾಗದಲ್ಲಿನ ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡಗಳ ಮತ್ತು ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಐ.ಎ.ಎಸ್ ಹಾಗೂ ಕೆ.ಎ.ಎಸ್ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಆಯ್ಕೆ ಮಾಡುವ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
2025ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಮೂಲಕ ಕಲ್ಯಾಣ ಕರ್ನಾಟಕ ಭಾಗದಲ್ಲಿನ ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡಗಳ ಮತ್ತು ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಐ.ಎ.ಎಸ್ ಹಾಗೂ ಕೆ.ಎ.ಎಸ್ ಪರೀಕ್ಷೆಗಳ ಪೂರ್ವಭಾವಿ ತರಬೇತಿ ನೀಡಲು ಉದ್ದೇಶಿಸಿದೆ. ಈ ಬಾರಿ ಒಟ್ಟು 200 ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತದೆ. ಆಸಕ್ತ ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು
ಐ.ಎ.ಎಸ್ ಹಾಗೂ ಕೆ.ಎ.ಎಸ್ ಪರೀಕ್ಷೆಗಳ ಪೂರ್ವಭಾವಿ ತರಬೇತಿಗೆ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡಗಳ ಮತ್ತು ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳನ್ನು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಿ ಪ್ರವೇಶ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ನಿಗದಿತ ಸಂಖ್ಯೆಗೆ ಅನುಗುಣವಾಗಿ ಆಯ್ಕೆ ಮಾಡಲಾಗುತ್ತದೆ. ಐ.ಎ.ಎಸ್ ಹಾಗೂ ಕೆ.ಎ.ಎಸ್ ಪರೀಕ್ಷೆಗಳ ಪೂರ್ವಭಾವಿ ತರಬೇತಿಯ ಅವಧಿ, ಶೈಕ್ಷಣಿಕ ವಿದ್ಯಾರ್ಹತೆ, ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ ವಿಳಾಸ ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ವಿವರಗಳು ಈ ಕೆಳಗಿನಂತಿದೆ.
ಯೋಜನೆಯ ಹೆಸರು & ಉದ್ದೇಶ:
ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿನ ಅಭ್ಯರ್ಥಿಗಳಿಗೆ IAS & KAS ಪರೀಕ್ಷೆಗಳಿಗೆ ತರಬೇತಿ ನೀಡಿ ಈ ಭಾಗದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಅರಿವು ಆಗಬೇಕು ఎంబ ಉದ್ದೇಶವಿದ್ದು ಸದರಿ ತರಬೇತಿಯು ಕೇವಲ ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿನ ಅಭ್ಯರ್ಥಿಗಳಿಗೆ ಅನ್ವಯವಾಗಿರುತ್ತದೆ. (ಜಿಲ್ಲೆಗಳ ಹೆಸರು: ಕಲಬುರಗಿ, ಕೊಪ್ಪಳ, ಬೀದರ್, ಯಾದಗಿರಿ, ಬಳ್ಳಾರಿ, ರಾಯಚೂರು, ವಿಜಯನಗರ,)
ಅರ್ಜಿ ಶುಲ್ಕ:
ಆನ್ಲೈನ್ ಅರ್ಜಿ ಶುಲ್ಕ 5 750/- (, 20, 22, 3ಎ & 3ಬಿ ಅಭ್ಯರ್ಥಿಗಳಿಗೆ)
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ವಿಶೇಷ ಚೇತನ ಅಭ್ಯರ್ಥಿಗಳಿಗೆ ಪರೀಕ್ಷಾ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಕೋರ್ಸಿನ ವಿವರ:
ಕೇಂದ್ರ ಲೋಕಸೇವಾ ಆಯೋಗ ಮತ್ತು ಕರ್ನಾಟಕ ಲೋಕಸೇವಾ ಆಯೋಗ ಕ್ರಮವಾಗಿ ಪ್ರತಿ ವರ್ಷ ಐ.ಎ.ಎಸ್. ಐ.ಎಫ್.ಎಸ್. ಐ.ಪಿ.ಎಸ್, ಐ.ಆರ್.ಎಸ್. ಮೊದಲಾದ 23 ವಿವಿಧ ಸೇವೆಗಳ ಹುದ್ದೆಗಳು ಮತ್ತು ಕೆ.ಎ.ಎಸ್ ಹುದ್ದೆಗಳ ನೇಮಕಾತಿಗೆ ನಡೆಸುವ ಪರೀಕ್ಷೆಗಳ ಸಿದ್ದೆತಗೆ (ಗೆಜೆಟೆಡ್ ಪ್ರೋಬೆಷನರಿ ಆಫೀಸರ್ಸ್) ತರಬೇತಿ ನೀಡಬೇಕಾಗಿರುತ್ತದೆ.
ಸದರಿ ತರಬೇತಿಗೆ ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಮತ್ತು ಪದವಿ ಅಂತಿಮ ಸೆಮಿಸ್ಟರ್ನಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಲು ಅರ್ಹರಿದ್ದು, ಆಯ್ಕೆ ಪ್ರಕ್ರಿಯೆಯ ಹಂತದಲ್ಲಿ ಪದವಿ ವ್ಯಾಸಂಗ ಮುಕ್ತಾಯಗೊಳಿಸಿರುವ ಬಗ್ಗೆ ಅಧಿಕೃತ ದಾಖಲೆಗಳನ್ನು ಹೊಂದಿರಬೇಕು ಮತ್ತು ಸಲ್ಲಿಸಬೇಕು.
ಅರ್ಹತೆಗಳು:
1. ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
2. ಕಡ್ಡಾಯವಾಗಿ ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿ ಆಗಿರಬೇಕು.
3. 371(ಜೆ) ಪ್ರಮಾಣ ಪತ್ರವನ್ನು ಹೊಂದಿರಬೇಕು.
4. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗೆ ನಿಗದಿತ ನಮೂನೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ಪಡೆದಿರಬೇಕು.
5. ವಿಶೇಷ ಚೇತನ ಮೀಸಲಾತಿಯ ಅಡಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ನಿಗದಿತ ಪ್ರಾಧಿಕಾರದಿಂದ ನಿಗದಿಪಡಿಸಲಾದ ಕೊನೆಯ ದಿನಾಂಕದೊಳಗೆ ವಿಶೇಷ ಚೇತನ ಪ್ರಮಾಣ ಪತ್ರ ಪಡೆದಿರಬೇಕು.
6. ವಿದ್ಯಾರ್ಥಿ ನಿಲಯ/ ಕ್ರೈಸ್ ವಿದ್ಯಾರ್ಥಿ ನಿಲಯ/ಸಫಾಯಿ ಕರ್ಮಚಾರಿ ಮೀಸಲಾತಿ ಅಡಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಪ್ರಮಾಣ ಪತ್ರ ಪಡೆದಿರಬೇಕು.
ವಾರ್ಷಿಕ ಆದಾಯ:
ವಾರ್ಷಿಕ ಆದಾಯ ಎಲ್ಲಾ ಮೂಲಗಳಿಂದ ರೂ.5.00 ಲಕ್ಷ ಮೀರಬಾರದು.
ಆಯ್ಕೆ ವಿಧಾನ:
1. ಅಭ್ಯರ್ಥಿಗಳನ್ನು ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
2. ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಆಧಾರದ ಮೇಲೆ ಮೂಲಕ ಅಭ್ಯರ್ಥಿಗಳನ್ನು ತರಬೇತಿ ಸಂಸ್ಥೆಗೆ ನಿಯೋಜಿಸಲಾಗುತ್ತದೆ.
3. ಪ್ರವೇಶ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾಗುತ್ತದೆ.
ಅರ್ಜಿ ಸಲ್ಲಿಸಲು ಹಾಗೂ ಶುಲ್ಕ ಪಾವತಿ ದಿನಾಂಕಗಳು:
1. ಆನ್ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ : 08-05-2025 ಮಧ್ಯಾಹ್ನ 12.00
2. ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 19-05-2025 2 5.00
3. ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 20-05-2025 ಸಂಜೆ 5.00 ರೊಳಗೆ
ಗಮನದಲ್ಲಿಡಬೇಕಾದ ಅಂಶಗಳು:
1. KEA ವೆಬ್ಸೈಟ್ ನಲ್ಲಿ (https://cetonline.karnataka.gov.in/kea) ನೀಡಲಾಗುವ ಮಾಹಿತಿಯು ಅಧಿಕೃತ ಹಾಗೂ ಅಂತಿಮವಾಗಿರುತ್ತದೆ.
2. UPSC/KPSC, IAS/KAS ಸ್ಪರ್ಧಾತ್ಮಕ ಪರೀಕ್ಷೆಗೆ ಇಲಾಖೆಯಿಂದ ಈಗಾಗಲೇ ತರಬೇತಿ ಪಡೆದ ಅಭ್ಯರ್ಥಿಗಳು KAS/SSC/RRB/Banking/ Group-C, ಸ್ಪರ್ಧಾತ್ಮಕ ಪರೀಕ್ಷೆಗೆ ಇಲಾಖೆಯಿಂದ ತರಬೇತಿ ಪಡೆದ ಅಭ್ಯರ್ಥಿಗಳು ತರಬೇತಿಗೆ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.
3. ಪರೀಕ್ಷಾ ಕೇಂದ್ರಗಳು: ಕಲಬುರಗಿ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ.
4. ಇಲಾಖೆಯ ವತಿಯಿಂದ ಯಾವುದೇ IAS/KAS ಪತ್ರ ವ್ಯವಹಾರವನ್ನು ನಡೆಸಲಾಗುವುದಿಲ್ಲವಾದುದರಿಂದ KEA ವೆಬ್ ಸೈಟ್ ಅನ್ನು ಕಾಲಕಾಲಕ್ಕೆ ವೀಕ್ಷಿಸತಕ್ಕದ್ದು ಹಾಗೂ KEA ವೆಬ್ಸೈಟ್ ನಲ್ಲಿ ಸೂಚನೆಯಾನುಸಾರವಾಗಿ ಪ್ರವೇಶ ಪರೀಕ್ಷಾ ಪತ್ರವನ್ನು ಡೌನಲೋಡ್ ಮಾಡಿಕೊಂಡು ಸಾಮಾನ್ಯ ಪ್ರವೇಶ ಪರೀಕ್ಷೆಗೆ ಹಾಜರಾಗುವುದು.
5. ತಪ್ಪು ಮಾಹಿತಿಯ ಕಾರಣದಿಂದ ಉಂಟಾಗಬಹುದಾದ ಲೋಪಗಳಿಗೆ ಸಂಬಂಧಪಟ್ಟ ಅಭ್ಯರ್ಥಿಗಳೇ ಜವಾಬ್ದಾರರಾಗಿರುತ್ತಾರೆ.
6. ಇಲಾಖಾ ವತಿಯಿಂದ ನಿಗದಿಪಡಿಸಿದ ದಿನಾಂಕದಂದು ಕೌನ್ಸಿಲಿಂಗ್, ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾಗದಿದ್ದಲ್ಲಿ ಅಂತಹ ಅಭ್ಯರ್ಥಿಗಳನ್ನು ಆಯ್ಕೆಗೆ ಪರಿಗಣಿಸುವುದಿಲ್ಲ. ಇಂತಹ ನಿರ್ಲಕ್ಷ್ಯಕ್ಕೆ ಅಭ್ಯರ್ಥಿಗಳೇ ನೇರ ಹೊಣೆಗಾರರಾಗಿರುತ್ತಾರೆ.
IMPORTANT LINKS: